July 16, 2025

Hampi times

Kannada News Portal from Vijayanagara

ವಿಜಯನಗರ ಜಿಲ್ಲೆಯ  5 ಎಂ.ಎಲ್.ಎ. ಕ್ಷೇತ್ರಗಳಿಗೆ ಕೊನೆ ದಿನ  41 ನಾಮಪತ್ರ ಸಲ್ಲಿಕೆ

https://youtu.be/NHc6OMSu0K4?si=SI_K4goOPEgwo6h2

 


ಹಂಪಿ ಟೈಮ್ಸ್ ಹೊಸಪೇಟೆ :
ವಿಜಯನಗರ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಗುರುವಾರ 38  ಅಭ್ಯರ್ಥಿಗಳಿಂದ ಒಟ್ಟು 41 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್  ತಿಳಿಸಿದ್ದಾರೆ.
88-ಹೂವಿನಹಡಗಲಿ ವಿಧಾನಸಭಾ ಕ್ಷೇತ್ರ:
ಹೂವಿನಹಡಗಲಿ(ಪರಿಶಿಷ್ಟ ಜಾತಿ) ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕೃಷ್ಣನಾಯ್ಕ ಅವರು ಎರಡು ನಾಮಪತ್ರ ಸಲ್ಲಿಸಿದ್ದಾರೆ. ಆಮ್ ಆದ್ಮಿ ಪಕ್ಷದಿಂದ ಎನ್.ಶ್ರೀಧರ ನಾಯ್ಕ, ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಕಾಯಣ್ಣನವರ ಪುತ್ರಪ್ಪ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ಭೋಜ್ಯಾನಾಯ್ಕ, ರಾಣಿ ಚನ್ನಮ್ಮ ಪಕ್ಷ ಇಂಡಿಯಾ ಪಕ್ಷದ ಅಭ್ಯರ್ಥಿಯಾಗಿ ಲಕ್ಕಪ್ಪ ಅಂಗಡಿ ಹಾಗೂ ಸ್ವತಂತ್ರ ಅಭ್ಯರ್ಥಿಯಾಗಿ ರಮೇಶ್ ಎಂ. ಅವರು ನಾಮಪತ್ರ ಸಲ್ಲಿಸಿದ್ದಾರೆ.
89-ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ:
ಹಗರಿಬೊಮ್ಮನಹಳ್ಳಿ(ಪರಿಶಿಷ್ಟ ಜಾತಿ) ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನೇಮಿರಾಜ ನಾಯ್ಕ ಕೆ., ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಹೆಚ್.ತಿಪ್ಪೇಸ್ವಾಮಿ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ತಿಪ್ಪೇಸ್ವಾಮಿ ವೆಂಕಟೇಶಪ್ಪ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ಸಿ.ಶಿವಮೂರ್ತಿ, ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಭ್ಯರ್ಥಿಯಾಗಿ ಆರ್. ಸುರೇಶ ರಾಂಪುರದ, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸುಗುಣ ಕೆ., ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷ ಹಾಗೂ ಸ್ವತಂತ್ರ ಅಭ್ಯರ್ಥಿಯಾಗಿ ಎಎಂಎ ಸುರೇಶ್ ಕುಮಾರ್, ಸ್ವತಂತ್ರ ಅಭ್ಯರ್ಥಿಗಳಾಗಿ ಹೆಚ್.ಮಂಜುನಾಥ್, ಜೆ.ಅಂಜಿನಪ್ಪ, ವಿಜಯನಾಯ್ಕ, ಪರಮೇಶ್ವರ ಎಲ್. ಹಾಗೂ ಡಾ.ವಿ.ಹೆಚ್.ಹನುಮಂತಪ್ಪ ಅವರು ನಾಮಪತ್ರ ಸಲ್ಲಿಸಿದ್ದಾರೆ.
90-ವಿಜಯನಗರ ವಿಧಾನಸಭಾ ಕ್ಷೇತ್ರ:
ವಿಜಯನಗರ(ಸಾಮಾನ್ಯ) ವಿಧಾನಸಭಾ ಕ್ಷೇತ್ರದಿಂದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ಎ.ವಿಜಯಕುಮಾರ್, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಮಂಜುನಾಥ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ಸ್ವತಂತ್ರ ಅಭ್ಯರ್ಥಿಗಳಾಗಿ ವೇಣುಗೋಪಾಲ್ ಡಿ., ಹೆಚ್.ಜಿ.ವಿರುಪಾಕ್ಷ, ಪಿ.ಮೌಲಾ ಅಲಿ, ಸುಲೇಮಾನ್, ಕೆ.ಶರಣಪ್ಪ ಅವರು ತಮ್ಮ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
96-ಕೂಡ್ಲಿಗಿ ವಿಧಾನಸಭಾ ಕ್ಷೇತ್ರ:
ಕೂಡ್ಲಿಗಿ(ಪರಿಶಿಷ್ಟ ಪಂಗಡ) ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ರಾಷ್ಟç ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಚಿತ್ತರ ಚನ್ನವೀರ, ಸ್ವತಂತ್ರ ಅಭ್ಯರ್ಥಿಗಳಾಗಿ ಬಿ.ಹುಲಿಕುಂಟೆಪ್ಪ, ಕೆ.ಲಲಿತಾ, ಬಂಗಾರಿ ಹನುಮಂತ ಅವರು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.
104-ಹರಪನಹಳ್ಳಿ ವಿಧಾನಸಭಾ ಕ್ಷೇತ್ರ:
ಹರಪನಹಳ್ಳಿ(ಸಾಮಾನ್ಯ) ವಿಧಾನಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳಾಗಿ ನಾಗರಾಜ್ ಹೆಚ್. ಮತ್ತು ಸುಜಾತಾ ನಾಗರಾಜ ಅವರು ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿಯಾಗಿ ಎನ್.ಎಂ.ನೂರ್ ಅಹಮ್ಮದ್, ಕರ್ನಾಟಕ ಮಕ್ಕಳ ಪಕ್ಷದ ಅಭ್ಯರ್ಥಿಯಾಗಿ ಜಯಣ್ಣ ಕೆ., ಸ್ವತಂತ್ರ ಅಭ್ಯರ್ಥಿಗಳಾಗಿ ಜಿ.ಕಲಿವೀರನ್ ಗೌಡ, ಲತಾ ಮಲ್ಲಿಕಾರ್ಜುನ, ಸಿ.ವಿ.ಲತಾ, ಸಂಗವ್ವ ಕೆ. ಉತ್ತಂಗಿ ಹಾಗೂ ಬಿ.ಎಂ.ಗುರುಮೂರ್ತಿ ಅವರು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

 

ಜಾಹೀರಾತು
error: Content is protected !!