https://youtu.be/NHc6OMSu0K4?si=SI_K4goOPEgwo6h2
ಸಿಐಟಿಯುನಿಂದ ಮೇ ದಿನಾಚರಣೆ
ಹಂಪಿ ಟೈಮ್ಸ್ ಹೊಸಪೇಟೆ :
ಕಾರ್ಮಿಕರು 138 ವರ್ಷಗಳ ಹಿಂದೆ ಎಂಟು ಗಂಟೆಗಳ ಕೆಲಸಕ್ಕಾಗಿ ಹೋರಾಟ ಮಾಡಿ ಜಯ ಪಡೆದುದರಿಂದಲೇ ಇಲ್ಲಿಯವರೆಗೆ 8 ಗಂಟೆಗಳ ಕೆಲಸ ಜಾರಿಗೆ ಬಂದಿದೆ, ಆದರೆ ಈಗ ಸರ್ಕಾರ ಈ ಅವಧಿಯನ್ನು 12 ಗಂಟೆಗೆ ವಿಸ್ತರಿಸುವುದಕ್ಕೆ ಮುಂದಾಗಿರುವುದು ಅತ್ಯಂತ ಖಂಡನೀಯ ಎಂದು ಸಿಐಟಿಯು ಜಿಲ್ಲಾ ಮುಖಂಡ ಆರ್ ಭಾಸ್ಕರ್ ರೆಡ್ಡಿ ಹೇಳಿದರು.
ನಗರದ ಶ್ರಮಿಕ ಭವನದಲ್ಲಿ ಸೋಮವಾರ ಕಾರ್ಮಿಕ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಡಿಎಚ್ ಎಸ್ ಸಂಘಟನೆಯ ಮುಖಂಡ ಎಂ ಜಂಬಯ್ಯನಾಯಕ ಮಾತನಾಡಿ, ಕಾರ್ಮಿಕರು ಒಗ್ಗಟ್ಟಾಗಿ ಚುನಾವಣೆಯಲ್ಲಿ ಬಿಜೆಪಿ ಸೋಲಿಸುವಂತೆ ಕರೆ ನೀಡಿದರು. ವಕೀಲರಾದ ಎ ಕರುಣಾನಿಧಿ ಮಾತನಾಡಿ, ಕಾರ್ಮಿಕರ ಕೇವಲ ಕೂಲಿಯ ಹೋರಾಟ ಪ್ರಭುತ್ವವನ್ನು ಬದಲಿಸುವುದಿಲ್ಲ, ಜೊತೆಗೆ ಕಾರ್ಮಿಕರು ಸಾಮಾಜಿಕವಾಗಿ ಮುಂಚೂಣಿಯಲ್ಲಿ ಹೋರಾಟ ನಡೆಸಿದಾಗ ಮಾತ್ರವೇ ಸಾಮಾಜಿಕವಾಗಿ ಬದಲಾವಣೆ ಸಾಧ್ಯ ಎಂಬುದನ್ನು ಮರೆಯಬಾರದು ಎಂದರು. ಮುಖಂಡರಾದ ಜೆ ಪ್ರಕಾಶ್, ಎಂ ಗೋಪಾಲ್, ರಮೇಶ್, ತಾಯಪ್ಪ ನಾಯಕ, ಎಲ್ಐಸಿ ರಾಜು, ಇತರರು ಭಾಗವಹಿಸಿದ್ದರು. ಯಲ್ಲಾಲಿಂಗ ನಿರ್ವಹಿಸಿದರು.
More Stories
ಕಳಚಿ ಬಿತ್ತು ರಾಷ್ಟ್ರಧ್ವಜ, ಈಬಾರಿ ಬಜೆಟ್ನಲ್ಲಿ ವಿಜಯನಗರ ಜಿಲ್ಲೆಗೆ ಮೆಡಿಕಲ್ ಕಾಲೇಜ್ : ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಭರವಸೆ
ತ್ರಿವಿಧ ದಾಸೋಹದ ದಕ್ಷಿಣ ಭಾರತದ ಕುಂಭಮೇಳ… ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ರಥೋತ್ಸವ