https://youtu.be/NHc6OMSu0K4?si=SI_K4goOPEgwo6h2
ಹಂಪಿಟೈಮ್ಸ್ ಹೊಸಪೇಟೆ:
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು 2022ರ ಸಾಲಿಗೆ ಕೊಡಮಾಡುವ ರಾಜ್ಯ ಮಟ್ಟದ ಡಾ.ಎಚ್.ಎನ್.ಪ್ರಶಸ್ತಿಗೆ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿಯ ವಿಜ್ಞಾನ ಶಿಕ್ಷಕ ಎಂ.ರಾಜು ಅವರು ಆಯ್ಕೆಯಾಗಿದ್ದಾರೆ.
ವೈಚಾರಿಕ ಚಿಂತಕ ಹುಲಿಕಲ್ ನಟರಾಜ್ ಸ್ಥಾಪಿತ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನಿಂದ ತುಮಕೂರಿನಲ್ಲಿ ಡಿ.28 ಹಾಗೂ 29 ರಂದು ನಡೆಯುವ ಎರಡನೇ ವರ್ಷದ ವೈಜ್ಞಾನಿಕ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಎಂ.ರಾಜು ಅವರು ಸಾಕಷ್ಟು ವೈಜ್ಞಾನಿಕ, ವೈಚಾರಿಕ ಚಿಂತನೆಗಳಲ್ಲಿ ತೊಡಗಿಸಿಕೊಂಡು, ಸಮಾಜ ಮುಖಿ ಕಾರ್ಯಗಳನ್ನು ಮಾಡಿದ್ದಾರೆ. ಅಲ್ಲದೇ ಹತ್ತು ಸಾವಿರಕ್ಕೂ ಹೆಚ್ಚು ಮರಗಳನ್ನು ಬೆಳೆಸಿ ಪರಿಸರ ಸಂರಕ್ಷಣೆ ಮುಂದುವರೆಸಿದ್ದಾರೆ ಎಂದು ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಜಿಲ್ಲಾಧ್ಯಕ್ಷ ಕಿಚಿಡಿ ಕೊಟ್ರೇಶ್ ತಿಳಿಸಿದರು.







More Stories
ಆಗಸ್ಟ್ 14ರಂದು ಹೊಸಪೇಟೆಯಲ್ಲಿ “ನಾ… ಏರಿದ ಎತ್ತರಕ್ಕೆ…!!” ಕೃತಿ ಲೋಕಾರ್ಪಣೆ
34 ವರ್ಷಗಳ ಸೇವೆ: ನಿಂಬಳಗೆರೆ ಇಂಗ್ಲಿಷ್ ಶಿಕ್ಷಕ ಎಂ.ಬಿ. ನಾಗರಾಜ್ಗೆ ಬೀಳ್ಕೊಡುಗೆ
ಜೆಸ್ಕಾಂ ನಿರ್ಲಕ್ಷ್ಯಕ್ಕೆ ಯುವರೈತ ಬಲಿ! ಅನಾಥವಾಯ್ತು ಹಸುಗೂಸುಗಳ ಭವಿಷ್ಯ! : ಶಾಸಕ ಕೃಷ್ಣನಾಯ್ಕ ಮೃತನ ಕುಟುಂಬಕ್ಕೆ ಸಾಂತ್ವನ, ಪರಿಹಾರ ಭರವಸೆ