https://youtu.be/NHc6OMSu0K4?si=SI_K4goOPEgwo6h2

HAMPI TIMES
ಬೆಳಗಾವಿ ಸುವಣಸೌಧ: ಮುಜರಾಯಿ ಇಲಾಖೆ ವ್ಯಾಪ್ತಿಗೊಳಪಡುವ ದೇವಸ್ಥಾನಗಳ ವಾರ್ಷಿಕ ನಿರ್ವಹಣಾ ವೆಚ್ಚವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಧಾರ್ಮಿಕ ದತ್ತಿ,ಹಜ್ ಹಾಗೂ ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಹೇಳಿದರು

ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿಂದು ಲಿಂಗಸುಗೂರು ಶಾಸಕ ಡಿ.ಎಸ್. ಹೂಲಗೇರಿಯವರ ಪರವಾಗಿ ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ಅವರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿದರು, ಮುಜರಾಯಿ ಇಲಾಖೆಗೆ ಅನುದಾನ ಬಹಳ ಕಡಿಮೆಯಿದ್ದು, ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆ ಸೇರಿದಂತೆ ಇಲಾಖೆಯ ಕಾರ್ಯಕ್ರಮಗಳಿಗೆ ಅನುದಾನ ಹೆಚ್ಚಿಸಲು ಪ್ರಯತ್ನಿಸಲಾಗುವುದ ಎಂದರು.
ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ಮಾತನಾಡಿ, ಮುಜರಾಯಿ ದೇವಸ್ಥಾನಗಳಿಗೆ 50 ಸಾವಿರ ರೂ., 1 ಲಕ್ಷ ರೂ., 2 ಲಕ್ಷ ರೂ.ಹೀಗೆ ಕನಿಷ್ಠ ಪ್ರಮಾಣದ ಅನುದಾನ ನೀಡಿದರೆ ನಿರ್ವಹಣೆ ಮಾಡುವುದು ಹೇಗೆ?, ವಾರ್ಷಿಕ ಅನುದಾನವನ್ನು ಕನಿಷ್ಟ 25 ಲಕ್ಷ ರೂ.ಗಳಿಗೆ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿದರು. ಪ್ರಶ್ನೆಗೆ ಒದಗಿಸಿರುವ ಲಿಖಿತ ಉತ್ತರದಲ್ಲಿ ದೇವಸ್ಥಾನಗಳ ಹೆಸರು ಹಾಗೂ ಮಾಹಿತಿ ಆಂಗ್ಲಭಾಷೆಯಲ್ಲಿದೆ. ಗ್ರಾಮಗಳ ಹೆಸರುಗಳೂ ಕೂಡ ತಪ್ಪಾಗಿವೆ ಅದನ್ನು ಸರಿಪಡಿಸಬೇಕು ಎಂದರು.



More Stories
ಕ್ರೀಡಾ ಜಗತ್ತಿಗೆ ಸ್ಫೂರ್ತಿ ಭಾರತದ ಮಹಿಳಾ ಆರ್ಚರಿ ಪಟು ಪಾಯಲ್ ನಾಗ್
ಬ್ರಿಡ್ಜ್ ಟು ಬೆಂಗಳೂರು’ ಮೂಲಕ ನವಶಕ್ತಿಯ ಅನಾವರಣ
ಹಾರ್ಮುಜ್ ಜಲಸಂಧಿ ಮುಕ್ತ