https://youtu.be/NHc6OMSu0K4?si=SI_K4goOPEgwo6h2

HAMPI TIMES
ಬೆಳಗಾವಿ ಸುವರ್ಣಸೌಧ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಇ-ತ್ಯಾಜ್ಯ ಸಂಸ್ಕರಣೆ ಮತ್ತು ಮರುಬಳಕೆ ಕರಿತು 2016ರಲ್ಲಿ ನಿಯಮಗಳನ್ನು ರೂಪಿಸಲಾಗಿದೆ. ಶೀಘ್ರವಾಗಿ ಎಲೆಕ್ಟಿçಕಲ್ ವಾಹನಗಳ ಬ್ಯಾಟರಿ ಹಾಗೂ ಇ-ತ್ಯಾಜ್ಯ ವಿಲೇವಾರಿಗೆ ವಿಶೇಷ ಕಾನೂನು ರೂಪಿಸುವುದಾಗಿ ಪ್ರವಾಸೋದ್ಯಮ ಹಾಗೂ ಜೀವಿಪರಿಸ್ಥಿತಿ ಮತ್ತು ಪರಿಸರ ಸಚಿವ ಆನಂದ್ ಸಿಂಗ್ ಹೇಳಿದರು.

ಸೋಮವಾರ ವಿಧಾನ ಪರಿಷತ್ ಪ್ರಶೋತ್ನರ ಕಲಾಪದಲ್ಲಿ ಶಾಸಕರಾದ ಕೆ.ಎ.ತಿಪ್ಪೇಸ್ವಾಮಿ ಹಾಗೂ ಡಿ.ಎಸ್.ಅರುಣ್ ಅವರ ಪ್ರಶ್ನೆಗಳಿಗೆ ಸಚಿವರು ಉತ್ತರಿಸಿದರು. ರಾಜ್ಯದಲ್ಲಿ ವಾರ್ಷಿಕವಾಗಿ 2018-19 ರಲ್ಲಿ 9294.94 ಟನ್, 2019-20 ರಲ್ಲಿ 44,240 ಟನ್ ಹಾಗೂ 2020-21 ರಲ್ಲಿ 96175 ಟನ್ ಇ-ತ್ಯಾಜ್ಯ ಉತ್ಪಾದನೆಯಾಗಿದೆ. 180 ಇ-ತ್ಯಾಜ್ಯ ಸಂಸ್ಕರಣೆ ಮತ್ತು ಮರುಬಳಕೆ ಘಟಕಗಳು ಇವೆ. ಇದರಲ್ಲಿ 93 ಘಟಕಗಳು ಕಾರ್ಯನಿರ್ವಹಿಸುತ್ತಿವೆ. 47 ಘಟಕಗಳು ಸ್ಥಾಪನೆ ಹಂತದಲ್ಲಿವೆ. 40 ಘಟಕಗಳು ಮುಚ್ಚಲ್ಪಟ್ಟಿವೆ. ಸರ್ಕಾರಿಂದ ಹೊಸ ಕೈಗಾರಿಕಾ ನೀತಿ 2020-25 ರನ್ವಯ ಕೈಗಾರಿಕೆಗಳಲ್ಲಿ ಇ-ತ್ಯಾಜ್ಯ ಮತ್ತು ಪ್ಲಾಸ್ಟಿಕ್ ತ್ಯಾಜ್ಯ ಪುನರ್ ಬಳಕೆ ಯಂತ್ರೋಪಕರಣಗಳನ್ನು ಅಳವಡಿಸಲು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಸಹಾಯಧನ ನೀಡಲಾಗುವುದು ಎಂದರು.
ಶಾಸಕ ಕೆ.ಎ.ತಿಪ್ಪೇಸ್ವಾಮಿ ಮಾತನಾಡಿ, ಬೆಂಗಳೂರು ವಿಶ್ವದಲ್ಲೇ ಹೆಚ್ಚು ಇ-ತ್ಯಾಜ್ಯ ಉತ್ಪಾದಿಸುವ ನಗರಗಳಲ್ಲಿ ಒಂದಾಗಿದೆ. ದೇಶದಲ್ಲಿ 3ನೇ ಸ್ಥಾನದಲ್ಲಿದೆ. ಇ-ತ್ಯಾಜ್ಯ ಮರುಬಳಕೆಗೆ ಯೋಗ್ಯವಾಗಿದೆ. ಒಂದು ಟನ್ ಅದಿರು ಸಂಸ್ಕರಿಸಿದರೆ 6 ಗ್ರಾಂ ಚಿನ್ನ ದೊರೆಯುತ್ತದೆ. ಆದರೆ 1 ಟನ್ ಇ-ತ್ಯಾಜ್ಯ ಸಂಸ್ಕರಿಸಿದರೆ 24 ಗ್ರಾಂ ಚಿನ್ನದ ಜೊತೆಗೆ, ತಾಮ್ರಾ, ಸಿಲಿಕಾ, ಕ್ಯಾಡ್ಮಿಯಮ್, ಅಲ್ಯೂಮಿನಯನ್ ಲೋಹಗಳು ಸೇರಿ ಮರು ಬಳಕೆಯ ಪ್ಲಾಸ್ಟಿಕ್ ದೊರಕುತ್ತೆ. ಸರ್ಕಾರ ಇ-ತ್ಯಾಜ್ಯ ಮರುಬಳಕೆಗೆ ಕಠಿಣ ನಿಯಮಗಳನ್ನು ಜಾರಿ ಗೊಳಿಸಬೇಕು ಎಂದರು.
ಶಾಸಕ ಡಿ.ಎಸ್.ಅರುಣ್ ಮಾತನಾಡಿ, ಖಾಸಗಿ ಸಾರ್ವಜನಿಕ ಸಹಭಾಗಿತ್ವ (ಪಿ.ಪಿ.ಪಿ) ಮಾದರಿಯಲ್ಲಿ ಇ-ತ್ಯಾಜ್ಯ ನಿರ್ವಹಣೆಗೆ ಸರ್ಕಾರ ಕ್ರಮಕೈಗೊಳ್ಳಬೇಕು. ಜರ್ಮನಿ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಇ-ವೆಹಿಕಲ್ಗಳನ್ನು ನಿಷೇಧಿಸಲಾಗಿದೆ. ಕಾರಣ ಬ್ಯಾಟರಿಗಳು ತ್ಯಾಜ್ಯ ಹೆಚ್ಚಾಗುತ್ತಿರುವುದು. ಆದ್ದರಿಂದ ಸರ್ಕಾರ ಬ್ಯಾಟರಿ ವಿಲೇವಾರಿಗೆ ವಿಶೇಷ ಕಾನೂನು ರೂಪಿಸಬೇಕು ಎಂದರು.



More Stories
ಮಧ್ಯಪ್ರಾಚ್ಯ ದೇಶಗಳಲ್ಲಿನ ಬಿಕ್ಕಟ್ಟು – ವಿಜಯನಗರ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ ಸ್ಥಾಪನೆ.
ಮಾ. 6ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್ವ್ಯೂವ್
ಹೊಸಪೇಟೆಯಲ್ಲಿ ಫೆ. ೨೭ಕ್ಕೆ ‘ಸರ್ವಧರ್ಮ ಸಮನ್ವಯ’ ಮಹಾರಥೋತ್ಸವದ ವೈಭವ!