https://youtu.be/NHc6OMSu0K4?si=SI_K4goOPEgwo6h2

ಹಂಪಿಟೈಮ್ಸ್ ಹೊಸಪೇಟೆ:

ಹಂಪಿಯ ತುಂಗಭದ್ರ ನದಿಯಲ್ಲಿ ಈಜಲು ಹೋಗಿದ್ದ ಯುವಕರಿಬ್ಬರು ನೀರುಪಾಲಾಗಿರುವ ಘಟನೆ ಬುಧವಾರ ನಡೆದಿದೆ.
ಸ್ನೇಹಿತರೊಂದಿಗೆ ಹಂಪಿ ಪ್ರವಾಸಕ್ಕೆ ಆಗಮಿಸಿದ್ದವರ ಪೈಕಿ ಇಬ್ಬರು ತುಂಗಭದ್ರಾ ನದಿಯಲ್ಲಿ ನೀರು ಪಾಲಾಗಿದ್ದು, ಕೊಚ್ಚಿ ಹೋದವರನ್ನು ಬೆಂಗಳೂರು ಮೂಲದ ಜೀವನ್(18), ಹರಿಶ್(18) ಎಂದು ಗುರುತಿಸಲಾಗಿದೆ.
ಜಿವನ್, ಹರೀಶ್ ಸೇರಿದಂತೆ ಐವರು ಸ್ನೇಹಿತರು ಗೆಳೆಯನ ಹುಟ್ಟುಹಬ್ಬ ಆಚರಣೆಗಾಗಿ ಮಂಗಳವಾರ ಬಳ್ಳಾರಿಗೆ ಆಗಮಿಸಿದ್ದು, ಬುಧವಾರ ಬಳ್ಳಾರಿಯ ಮೂವರು ಸೇರಿದಂತೆ 8 ಜನರು ಹಂಪಿ ಪ್ರವಾಸ ಕೈಗೊಂಡಿದ್ದರು. ಮಧ್ಯಾಹ್ನ 3 ಗಂಟೆ ಸುಮಾರಿಗೆ ಹಂಪಿಯ ಪುರದಂರ ಮಂಟಪದ ಬಳಿ ನದಿಯಲ್ಲಿ ಈಜಲು ತೆರಳಿದ್ದು, ಇಬ್ಬರು ನೀರಿನ ಸೆಳೆತಕ್ಕೆ ಸಿಲುಕಿ ಕಣ್ಮರೆಯಾಗಿದ್ದಾರೆ. ಅಗ್ನಿ ಶಾಮಕ ದಳ, ಮುಳುಗು ತಜ್ಞರು ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಹಂಪಿ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.



More Stories
ಸೋಷಿಯಲ್ ಮೀಡಿಯಾ: ಕಣ್ಣಿಗೆ ಆಕರ್ಷಕ, ಮನಸ್ಸಿಗೆ ಮಾರಕ!
ಉದ್ಯಮಿ ಕೆ.ರವಿಶಂಕರ್ ಜನ್ಮದಿನದ ಸಾರ್ಥಕ ಸೇವೆ: ಆಸ್ಪತ್ರೆಯ ರೋಗಿಗಳಿಗೆ ಪೌಷ್ಟಿಕಾಹಾರ ವಿತರಣೆ
ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್, ಕೋಟ್ಯಂತರ ರೂಪಾಯಿ ರಾಜಸ್ವ ಸಂಗ್ರಹ : ಅಬಕಾರಿ ನಿರೀಕ್ಷಕಿ ಎಸ್.ಬಿ.ಮಮತಾ