April 29, 2026

Hampi times

Kannada News Portal from Vijayanagara

ಸ್ವದೇಶ್‌ ದರ್ಶನ್‌ ಯೋಜನೆಯಲ್ಲಿ  ಹಂಪಿ-ಮೈಸೂರು ಸೇರ್ಪಡೆ: ಸಚಿವೆ ಶಶಿಕಲಾ ಅ ಜೊಲ್ಲೆ ಸ್ವಾಗತ

https://youtu.be/NHc6OMSu0K4?si=SI_K4goOPEgwo6h2

ಹಂಪಿ ಹಾಗೂ ಮೈಸೂರು ನಗರಗಳು ಇನ್ನಷ್ಟು ಅಭಿವೃದ್ದಿ

ಹಂಪಿಟೈಮ್ಸ್ ಹೊಸಪೇಟೆ: ಕೇಂದ್ರ ಸರಕಾರದ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವಾಲಯದ ವತಿಯಿಂದ ಪ್ರಾರಂಭಿಸಲಾದ ಸ್ವದೇಶ ದರ್ಶನ್‌ 2.0 ಯೋಜನೆಯಲ್ಲಿ ರಾಜ್ಯದ ಹಂಪಿ ಹಾಗೂ ಮೈಸೂರು ಸೇರ್ಪಡೆಯಾಗಿರುವದರ ಬಗ್ಗೆ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ, ಹಜ್‌ ಮತ್ತು ವಕ್ಪ್‌ ಸಚಿವರಾದ ಶಶಿಕಲಾ ಅ ಜೊಲ್ಲೆ ಸಂತಸ ವ್ಯಕ್ತಪಡಿಸಿದ್ದಾರೆ.

 

ಸ್ವದೇಶ್ ದರ್ಶನ್ ಯೋಜನೆಯು ಕೇಂದ್ರೀಯ ವಲಯದ ಯೋಜನೆಯಾಗಿದ್ದು 2014-15 ರಲ್ಲಿ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವಾಲಯ, ಭಾರತ ಸರ್ಕಾರವು ಥೀಮ್ ಆಧಾರಿತ ಪ್ರವಾಸಿ ಸರ್ಕ್ಯೂಟ್‌ಗಳ ಸಮಗ್ರ ಅಭಿವೃದ್ಧಿಗಾಗಿ ಪ್ರಾರಂಭಿಸಲಾಗಿತ್ತು. ಈ ಯೋಜನೆಯು ಭಾರತದಲ್ಲಿ ಪ್ರವಾಸೋದ್ಯಮದ ಸಾಮರ್ಥ್ಯವನ್ನು ಉತ್ತೇಜಿಸಲು, ಅಭಿವೃದ್ಧಿಪಡಿಸಲು ಮತ್ತು ಬಳಸಿಕೊಳ್ಳುವ ಗುರಿಯನ್ನು ಹೊಂದಿದೆ. ಸ್ವದೇಶ್ ದರ್ಶನ್ ಯೋಜನೆಯಡಿಯಲ್ಲಿ, ಪ್ರವಾಸೋದ್ಯಮ ಸಚಿವಾಲಯವು ಕೇಂದ್ರ ಹಣಕಾಸು ನೆರವನ್ನು ರಾಜ್ಯ ಸರ್ಕಾರಗಳಿಗೆ, ಕೇಂದ್ರಾಡಳಿತ ಪ್ರದೇಶದ ಆಡಳಿತಗಳಿಗೆ ಸರ್ಕ್ಯೂಟ್‌ಗಳ ಮೂಲಸೌಕರ್ಯ ಅಭಿವೃದ್ಧಿಗೆ ಒದಗಿಸುತ್ತದೆ.

ಆಯಾ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆಗೆ ಪ್ರೇರಕ ಶಕ್ತಿ, ವಿವಿಧ ಕ್ಷೇತ್ರಗಳೊಂದಿಗೆ ಸಿನರ್ಜಿ ನಿರ್ಮಿಸಲು ಪ್ರವಾಸೋದ್ಯಮ ಕ್ಷೇತ್ರವನ್ನು ಪ್ರಮುಖವಾಗಿರಿಸುವ ಕಲ್ಪನೆಯೊಂದಿಗೆ ಸ್ವಚ್ಛ ಭಾರತ ಅಭಿಯಾನ, ಸ್ಕಿಲ್ ಇಂಡಿಯಾ, ಮೇಕ್ ಇನ್ ಇಂಡಿಯಾ ಮುಂತಾದ ಇತರ ಯೋಜನೆಗಳೊಂದಿಗೆ ಸಂಯೋಜಿಸಲು ಈ ಯೋಜನೆಯನ್ನು ರೂಪಿಸಲಾಗಿದೆ. ಆಯಾ ನಗರಗಳಲ್ಲಿ ಪ್ರವಾಸೋದ್ಯಮವನ್ನ ಉತ್ತೇಜಿಸಲು ಹಾಗೂ ಅಭಿವೃದ್ದಿಗೊಳಿಸಲು ಇದು ಬಹಳ ಅನುಕೂಲವಾಗಲಿದೆ. ಈ ಯೋಜನೆಯ ಅಡಿಯಲ್ಲಿ ಹಂಪಿ ಹಾಗೂ ಮೈಸೂರು ನಗರಗಳು ಇನ್ನಷ್ಟು ಅಭಿವೃದ್ದಿಯನ್ನು ಹೊಂದಲಿವೆ ಎಂದು ಹೇಳಿದ್ದಾರೆ.

Please follow and like us:

 

 

 

 

 

Translate »
[t4b-ticker]
error: Content is protected !!