https://youtu.be/NHc6OMSu0K4?si=SI_K4goOPEgwo6h2

ಹಂಪಿ ಟೈಮ್ಸ್ ಹೊಸಪೇಟೆ:
ಹೊಸಪೇಟೆ ತಾಲ್ಲೂಕಿನಲ್ಲಿ ಮಳೆಯಿಂದ ಸೋರುತ್ತಿರುವ ಮತ್ತು ಸಂಪೂರ್ಣ ದುರಸ್ತಿಗೆ ಒಳಗಾಗಿರುವ ಒಟ್ಟು 641 ಕೊಠಡಿಗಳನ್ನು 3 ತಿಂಗಳಲ್ಲಿ ರಿಪೇರಿ ಮಾಡಿಸಬೇಕೆಂದು ಜಿಲ್ಲಾಧಿಕಾರಿಯವರಿಗೆ ವಸತಿ, ಹಜ್ ಮತ್ತು ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರು ಸೂಚಿಸಿದರು.

ವಿಜಯನಗರ ಜಿಲ್ಲಾ ಕೇಂದ್ರ ಹೊಸಪೇಟೆ ತಾಲ್ಲೂಕಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತಾಲ್ಲೂಕುವಾರು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ, ಶಾಲೆಯಲ್ಲಿ ಇರಬೇಕಾದ ಆಸನ, ಶೌಚಾಲಯ, ಕುಡಿಯುವ ನೀರು, ಕಾಂಪೌAಡ್ ಸೇರಿದಂತೆ ಎಲ್ಲ ಸೌಕರ್ಯ ನೀಡಿ ಶೈಕ್ಷಣಿಕ ಪ್ರಗತಿಯನ್ನು ದಾಖಲಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚನೆ ನೀಡಿದರು




More Stories
ಸೋಷಿಯಲ್ ಮೀಡಿಯಾ: ಕಣ್ಣಿಗೆ ಆಕರ್ಷಕ, ಮನಸ್ಸಿಗೆ ಮಾರಕ!
ಉದ್ಯಮಿ ಕೆ.ರವಿಶಂಕರ್ ಜನ್ಮದಿನದ ಸಾರ್ಥಕ ಸೇವೆ: ಆಸ್ಪತ್ರೆಯ ರೋಗಿಗಳಿಗೆ ಪೌಷ್ಟಿಕಾಹಾರ ವಿತರಣೆ
ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್, ಕೋಟ್ಯಂತರ ರೂಪಾಯಿ ರಾಜಸ್ವ ಸಂಗ್ರಹ : ಅಬಕಾರಿ ನಿರೀಕ್ಷಕಿ ಎಸ್.ಬಿ.ಮಮತಾ