https://youtu.be/NHc6OMSu0K4?si=SI_K4goOPEgwo6h2

ನವೆಂಬರ್ 23 ಶ್ರೀ ಬಸವೇಶ್ವರ ವೃತ್ತ, ಪುತ್ಥಳಿ ಅನಾವರಣ

ಹಂಪಿ ಟೈಮ್ಸ್ ಹೊಸಪೇಟೆ:
ನಗರದಲ್ಲಿ ನ.20 ರಿಂದ ನ.23ರವರೆಗೆ ಜರುಗಲಿರುವ ನಗರದ ಶ್ರೀ ಕೊಟ್ಟೂರು ಸಂಸ್ಥಾನಮಠದ ಜಗದ್ಗುರು ಶ್ರೀ ಡಾ.ಸಂಗನಬಸವ ಮಹಾಸ್ವಾಮಿಯವರ ಪಟ್ಟಾಧಿಕಾರ ಸುವರ್ಣ ಮಹೋತ್ಸವದಂಗವಾಗಿ ಶಿಲಾಮಂಟಪ ಉದ್ಘಾಟನೆ ಹಾಗೂ ಶ್ರೀ ಬಸವೇಶ್ವರ ವೃತ್ತ, ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಧಾರವಾಡದ ಗ್ರಾಮೀಣ ಶಾಸಕ ವಿನಯ್ ಕುಲಕರ್ಣಿ ಅವರನ್ನು ಹೊಸಪೇಟೆ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಹಾಗೂ ಮುಖಂಡರು ಸೋಮವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಭೇಟಿ ಮಾಡಿ ಆಹ್ವಾನಿಸಿದರು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಪೊಸ್ಟರ್ ಬಿಡುಗಡೆ ಮಾಡಿದ ಶಾಸಕ ವಿನಯ್ ಕುಲಕರ್ಣಿ ಅವರು ಮಾತನಾಡಿ, ಶ್ರೀ ಬಸವೇಶ್ವರ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಬರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕು ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಎಚ್.ವಿ.ಶರಣಸ್ವಾಮಿ, ಪ್ರಧಾನ ಕಾರ್ಯದರ್ಶಿ ಕೆ.ರವಿಶಂಕರ, ಹಿರಿಯ ಮುಖಂಡರಾದ ಕೋರಿಶೆಟ್ಟಿ ಲಿಂಗಪ್ಪ, ಜಾಲಿ ಪ್ರಕಾಶ, ನಗರಸಭೆ ಸದಸ್ಯರಾದ ಕಿರಣ್ ಶಂಕ್ರಿ, ಮಂಜುನಾಥ, ಯುವ ಮುಖಂಡ ಕಿಚಿಡಿ ಕೊಟ್ರೇಶ, ದೇವರಾಜ, ಲೇಪಾಕ್ಷ ಜವಳಿ ಇತರರಿದ್ದರು.





More Stories
ಹೊಸಪೇಟೆಯಲ್ಲಿ ಫೆ. ೨೭ಕ್ಕೆ ‘ಸರ್ವಧರ್ಮ ಸಮನ್ವಯ’ ಮಹಾರಥೋತ್ಸವದ ವೈಭವ!
ಸಾಹಿತ್ಯ, ವೈಚಾರಿಕತೆ ಹಾಗೂ ಆಡಳಿತದ ತ್ರಿವೇಣಿ ಸಂಗಮಕ್ಕೆ ‘ನಾಡೋಜ’ ಗೌರವ
ಯುವ ಕವಿಗಳು ಜನಸಾಮಾನ್ಯರ ಬದುಕು-ಬವಣೆಗಳಿಗೆ ಧ್ವನಿಯಾಗಿ