https://youtu.be/NHc6OMSu0K4?si=SI_K4goOPEgwo6h2

ಹಂಪಿ ಟೈಮ್ಸ್ ಹೊಸಪೇಟೆ
ನಗರದ ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಸಂಸ್ಥಾನಮಠ ದಲ್ಲಿ ಫೆ.15 ರಂದು ಸಂಜೆ 7 ಗಂಟೆಗೆ ಶಿವಾನುಭವ ಸಂಪದ-1160 ನಡೆಯಲಿದೆ.

ಶ್ರೀ ಜಗದ್ಗುರು ಕೊಟ್ಟೂರು ಬಸವಲಿಂಗ ಮಹಾಸ್ವಾಮಿಗಳು ಸಾನ್ನಿಧ್ಯವಹಿಸುವರು. ಕನ್ನಡ ವಿವಿ ಪ್ರಾಧ್ಯಾಪಕ ಡಾ.ಕೆ.ರವೀಂದ್ರನಾಥ ಉಪನ್ಯಾಸ ನೀಡಲಿದ್ದಾರೆ. ಹೊಸಪೇಟೆ ನೂತನ ತಹಶೀಲ್ದಾರ್ರಾಗಿ ಆಗಮಿಸಿರುವ ಶೃತಿ ಎಂ.ಮಳ್ಳಪ್ಪಗೌಡ್ರ ಇವರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ. ಆರ್ಯವೈಶ್ಯ ಸಮಾಜದ ಮಾಜಿ ಅಧ್ಯಕ್ಷ ಭೂಪಾಳ ರಾಘವೇಂದ್ರಶೆಟ್ರು, ಹೊಸಪೇಟೆ ಬ್ರಾಹ್ಮಣ ಸಂಘದ ಅದ್ಯಕ್ಷ ಕೆ.ದಿವಾಕರ, ಅಖಿಲ ಕರ್ನಾಟಕ ಬ್ರಾಹ್ಮಣರ ಮಹಾಸಭಾದ ನಿರ್ದೇಶಕ ಹೆಚ್.ಉಮೇಶ, ಶ್ರೀ ಆದಿನಾಥ ಜೈನ್ ಶ್ವೇತಾಂಬರ ಸಂಘದ ಅಧ್ಯಕ್ಷ ಕೇಸರಿಮಲ್ ಜೈನ ಉಪಸ್ಥಿತರಿರಲಿದ್ದಾರೆ. ಸದ್ಭಕ್ತರು ಸಕಾಲಕ್ಕೆ ಆಗಮಿಸಿ ಶಿವಾನುಭವದ ಪ್ರಯೋಜನ ಪಡೆಯಬೇಕೆಂದು ಕೊಟ್ಟೂರುಸ್ವಾಮಿ ಸಂಸ್ಥಾನ ಮಠ ತಿಳಿಸಿದೆ.



More Stories
ಹೊಸಪೇಟೆಯಲ್ಲಿ ಯುವಕನ ಬರ್ಬರ ಹತ್ಯೆ- ಕೊಲೆ ಆರೋಪಿಗಳು ಶರಣು, ಆತಂಕದ ವಾತಾವರಣ ನಿರ್ಮಾಣ
ಸೋಷಿಯಲ್ ಮೀಡಿಯಾ: ಕಣ್ಣಿಗೆ ಆಕರ್ಷಕ, ಮನಸ್ಸಿಗೆ ಮಾರಕ!
ಉದ್ಯಮಿ ಕೆ.ರವಿಶಂಕರ್ ಜನ್ಮದಿನದ ಸಾರ್ಥಕ ಸೇವೆ: ಆಸ್ಪತ್ರೆಯ ರೋಗಿಗಳಿಗೆ ಪೌಷ್ಟಿಕಾಹಾರ ವಿತರಣೆ