https://youtu.be/NHc6OMSu0K4?si=SI_K4goOPEgwo6h2

ಹಂಪಿ ಟೈಮ್ಸ್ ಹೊಸಪೇಟೆ:
ಕೂಡ್ಲಿಗಿ ತಾಲೂಕು ಹೊಸಹಳ್ಳಿ ಹೋಬಳಿ ಕಂದಾಯ ಪರಿವೀಕ್ಷಕ ಬಿ.ಮುರುಳಿಕೃಷ್ಣ ಇವರು ಮೇಲಾಧಿಕಾರಿಗಳ ಅನುಮತಿ ಪಡೆಯದೇ ಪದೇ ಪದೇ ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಿ ಮತ್ತು ಸರ್ಕಾರಿ ಕೆಲಸವನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯತನ ಹಾಗೂ ಬೇಜವಾಬ್ಧಾರಿತನ ತೋರಿರುವುದರಿಂದ ಕರ್ನಾಟಕ ನಾಗರಿಕ ಸೇವಾ ನಿಯಮದಡಿ ಸೇವೆಯಿಂದ ಅವರನ್ನು ಅಮಾನತ್ತುಗೊಳಿಸಲಾಗಿದೆ ಎಂದು ಶಿಸ್ತುಪ್ರಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಆದೇಶಿಸಿದ್ದಾರೆ.
ಮೇಲಾಧಿಕಾರಿಗಳ ನೋಟೀಸಿಗೆ ಸಮರ್ಪಕವಾಗಿ ಸ್ಪಂದಿಸದೇ, ಸರ್ಕಾರಿ ಕೆಲಸಕ್ಕೆ 62 ದಿನ ಕರ್ತವ್ಯಕ್ಕೆ ಗೈರು, ತಾವು ನಿರ್ವಹಿಸುತ್ತಿದ್ದ ಅಭಿಲೇಖಾಲಯದ ಕೊಠಡಿಯ ಬೀಗದ ಕೈಯನ್ನು ಯಾರಿಗೂ ನೀಡದೇ, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಕೆಲಸಕ್ಕೆ ತೊಂದರೆಯುಂಟು ಮಾಡಿದ್ದಾರೆ ಎಂಬ ವರದಿಯಾಧರಿಸಿ ಅಮಾನತ್ತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.




More Stories
ವಿಶ್ವ ಮಲೇರಿಯಾ ಜಾಗೃತಿ ದಿನ: ಬೇವಿನಾಳ ಗ್ರಾಮದಲ್ಲಿ ಸಾರ್ವಜನಿಕರಿಗೆ ಅರಿವು
ಬಳ್ಳಾರಿ ಲಿಡ್ಕರ್ ಎಂಪೋರಿಯಂನಲ್ಲಿ ಚರ್ಮವಸ್ತುಗಳ ವಿಶೇಷ ರಿಯಾಯಿತಿ ದರದಲ್ಲಿ ಮಾರಾಟ
ಕ್ರೀಡಾ ಜಗತ್ತಿಗೆ ಸ್ಫೂರ್ತಿ ಭಾರತದ ಮಹಿಳಾ ಆರ್ಚರಿ ಪಟು ಪಾಯಲ್ ನಾಗ್