https://youtu.be/NHc6OMSu0K4?si=SI_K4goOPEgwo6h2

ಹಂಪಿ ಟೈಮ್ಸ್ ಬಳ್ಳಾರಿ

ಮತದಾನ ಆದ್ಯ ನಾಗರಿಕರ ಕರ್ತವ್ಯವಾಗಿದ್ದು, ಅರ್ಹ ಮತದಾರರು ತಪ್ಪದೇ ಮತ ಚಲಾವಣೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ನ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಇವರ ಆಶ್ರಯದಲ್ಲಿ ನಗರದ ಎಪಿಎಂಸಿ ಮಾರುಕಟ್ಟೆ ಪ್ರದೇಶದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಅಭಿಯಾನದಲ್ಲಿ ಅವರು ಮಾತನಾಡಿದರು.
ಮೇ 07 ರಂದು ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಯೊಬ್ಬ ನಾಗರಿಕರು ಮತ ಚಲಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು.
ಬಳ್ಳಾರಿ ತಾಲ್ಲೂಕು ಸ್ವೀಪ್ ನೋಡೆಲ್ ಅಧಿಕಾರಿ ಹಾಗೂ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಚನ್ನಬಸಪ್ಪ ಮಾತನಾಡಿ, ಯಾವುದೇ ಆಸೆ-ಅಮೀಷಗಳಿಗೆ ಒಳಗಾಗದೇ ಮೇ 07 ರಂದು ಪ್ರತಿಯೊಬ್ಬರು ಮತ ಚಲಾಯಿಸಬೇಕು. ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಎಂಪಿಎಂಸಿ ಮಾರುಕಟ್ಟೆಯ ಅಧಿಕಾರಿ, ಸಿಬ್ಬಂದಿ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.



More Stories
ಬಿಡಿಸಿಸಿ ಬ್ಯಾಂಕ್ ಗೆ ₹13.08 ಕೋಟಿ ನಿವ್ವಳ ಲಾಭ : ಕೆ.ತಿಪ್ಪೇಸ್ವಾಮಿ
ಎಂ.ಪಿ. ಪ್ರಕಾಶ ಅಧಿಕಾರಕ್ಕಿಂತ ಮೌಲ್ಯಗಳಿಗೆ ಬೆಲೆ ನೀಡಿದ ಮಹಾನ್ ನಾಯಕ: ಮಾಜಿ ಸಿಎಂ ಸಿದ್ದರಾಮಯ್ಯ
ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ಅಧಿಕಾರ ಸ್ವೀಕಾರ