https://youtu.be/NHc6OMSu0K4?si=SI_K4goOPEgwo6h2

ಹಂಪಿ ಟೈಮ್ಸ್ ಬಳ್ಳಾರಿ
ಅಪರಾಧಗಳನ್ನು ನಿಯಂತ್ರಿಸಲು ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ. ಅವರು ಹೇಳಿದರು. ನಗರದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಗೃಹ ಇಲಾಖೆಯ ಜಿಲ್ಲಾ ಮಟ್ಟದ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಮಾತನಾಡಿದರು.
ಇದನ್ನೂ ಓದಿ: ಸಕ್ಕರೆ ಕಾರ್ಖಾನೆ ನಾನೇ ಹಾಕ್ತಿನಿ: ಶಾಸಕ ಗವಿಯಪ್ಪ ಘೋಷಣೆ
ಸಿಸಿಟಿವಿಗಳ ಡಿವಿಆರ್ಗಳನ್ನು ಕಳ್ಳರು ಕಿತ್ತುತ್ತಿರುವ ಕಾರಣ ಸಿಸಿಟಿವಿಗಳನ್ನು ಗೂಗಲ್ ಡ್ರೆವ್ ಅಥವಾ ಐ ಕ್ಲೌಡ್ ಡ್ರೆವ್ಗೆ ಕನೆಕ್ಟ್ ಮಾಡಲಾಗಿದ್ದು, ರೆಕಾರ್ಡ್ ಆಗಿರುವ ಮಾಹಿತಿ ಇರುತ್ತದೆ. ಯಾವುದೇ ತನಿಖಾ ಏಜೆನ್ಸಿಗಳ ವಿಚಾರಣೆ ಆನ್ಲೈನ್ನಲ್ಲಿ ನಡೆಯುವುದಿಲ್ಲ.

ಸಿಬಿಐ, ಇಡಿ, ಪೊಲೀಸ್ ಇನ್ನಿತರೆಗಳ ಹೆಸರಿನಲ್ಲಿ ನಡೆಯುತ್ತಿರುವ ಸೈಬರ್ ಅಪರಾಧಗಳ ಕುರಿತು ಜನರು ಸದಾಕಾಲ ಎಚ್ಚರವಾಗಿದ್ದು, ಏನಾದರೂ ಸಮಸ್ಯೆಗಳಿದ್ದಲ್ಲಿ ತಕ್ಷಣವೇ ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು ಎಂದರು.
ಸಂಚಾರಿ ಪೊಲೀಸ್ ಠಾಣೆ ಸಿಪಿಐ ಅಯ್ಯನಗೌಡ ಪಾಟೀಲ್ ಮಾತನಾಡಿ, ಮಕ್ಕಳ ಸುರಕ್ಷತೆಗಾಗಿ ಅಪ್ರಾಪ್ತರಿಗೆ ವಾಹನಗಳನ್ನು ಚಲಾಯಿಸಲು ಕೊಡಬಾರದು.
ಅಪ್ರಾಪ್ತರು ವಾಹನ ಚಾಲಿಸಿದಲ್ಲಿ ಮತ್ತು ವಾಹನ ಕೊಟ್ಟವರಿಗೆ ದಂಡ ವಿಧಿಸಲಾಗುತ್ತದೆ. ನಗರದ ಐದು ವೃತ್ತಗಳಲ್ಲಿ ಸಿಗ್ನಲ್ ಲೈಟ್ಗಳನ್ನು ಅಳವಡಿಸಿದ್ದು, ಉಳಿದೆರೆಡು ವೃತ್ತಗಳಲ್ಲಿ ಶೀಘ್ರದಲ್ಲೇ ಸಿಗ್ನಲ್ ಲೈಟ್ಗಳನ್ನು ಅಳವಡಿಸಲಾಗುತ್ತದೆ. ಶಿಕ್ಷಣ ಸಂಸ್ಥೆಗಳ ವಾಹನಗಳು – ಅವಶ್ಯಕ ಪದಾರ್ಥಗಳ ವಾಹನಗಳ ಸಂಚಾರ, ಸಂಚಾರಿ ನಿಯಮಗಳನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅವ್ವಾರು ಮಂಜುನಾಥ್ ಮಾತನಾಡಿ, ದಿನದ 24 ತಾಸು ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಇಲಾಖೆಗೆ ನಮ್ಮೆಲ್ಲರ ಸಹಕಾರ ಅತ್ಯಗತ್ಯ. ಕರ್ತವ್ಯದ ಒತ್ತಡ, ಸಿಬ್ಬಂದಿಗಳ ಕೊರತೆ ಮತ್ತು ಇನ್ನಿತರೆ ಸಮಸ್ಯೆಗಳಲ್ಲೂ ಉತ್ತಮವಾದ ಸೇವೆ ಸಲ್ಲಿಸಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುತ್ತಿರುವ ಪೊಲೀಸ್ ಇಲಾಖೆಯ ಸೇವೆ ಶ್ಲಾಘನೀಯ ಎಂದರು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಎಸ್. ದೊಡ್ಡಗೌಡ, ಉಪಾಧ್ಯಕ್ಷ ಸೊಂತ ಗಿರಿಧರ, ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶಬಾಬು ಜಂಟಿ ಕಾರ್ಯದರ್ಶಿ ಡಾ. ಮರ್ಚೆಡ್ ಮಲ್ಲಿಕಾರ್ಜುನಗೌಡ, ವಿ. ರಾಮಚಂದ್ರ, ನಿಕಟಪೂರ್ವ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ, ಮಾಜಿ ಅಧ್ಯಕ್ಷ ಬಿ. ಮಹಾರುದ್ರಗೌಡ, ಡಿವೈಎಸ್ಪಿ ಮಾಲತೇಶ್ ಕೋನಬೇವು ಇತರರಿದ್ದರು





More Stories
ಫೆ.13 ರಿಂದ 3ದಿನ ‘ಹಂಪಿ ಉತ್ಸವ-2026ಕ್ಕೆ ಸಿಎಂ ಚಾಲನೆ : ಸಚಿವ ಜಮೀರ್ ಖಾನ್
ಫೆಬ್ರವರಿಯಲ್ಲಿ ಶ್ರೀ ವಾಲ್ಮೀಕಿ ಜಾತ್ರೋತ್ಸವ
ಯಾರೂ ನಿರ್ಲಕ್ಷ್ಯವಹಿಸಬಾರದು: ಡಿ.ವೈ.ಎಸ್.ಪಿ ಸಂತೋಷ್ ಚೌಹಾಣ್