June 26, 2026

Hampi times

Kannada News Portal from Vijayanagara

ತುಂಗಭದ್ರಾ ಜಲಾಶಯಕ್ಕೆ ಹೊಸ ಕಳೆ , ಇಂದು 33 ನೂತನ ಕ್ರೆಸ್ಟ್‌ಗೇಟ್‌ ಲೋಕಾರ್ಪಣೆ

https://youtu.be/NHc6OMSu0K4?si=SI_K4goOPEgwo6h2

ಮೂರು ರಾಜ್ಯಗಳ ಸಿಎಂ ಸಮಾಗಮ

ಹಂಪಿ ಟೈಮ್ಸ್‌ ಹೊಸಪೇಟೆ

ಕಲ್ಯಾಣ ಕರ್ನಾಟಕದ ರೈತರ ಪಾಲಿನ ಜೀವನಾಡಿ, ಲಕ್ಷಾಂತರ ಎಕರೆ ಕೃಷಿ ಭೂಮಿಗೆ ಜಲಧಾರೆ ನೀಡುವ ತುಂಗಭದ್ರಾ ಜಲಾಶಯವು ಇದೀಗ ನೂತನ ಕ್ರೆಸ್ಟ್‌ಗೇಟ್‌ಗಳೊಂದಿಗೆ ಹೊಸ ಇತಿಹಾಸ ಸೃಷ್ಟಿಸಲು ಸಜ್ಜಾಗಿದೆ. ಕಳೆದ ವರ್ಷ ಸಂಭವಿಸಿದ ತಾಂತ್ರಿಕ ದೋಷದಿಂದ ರೈತರು ಆತಂಕಕ್ಕೀಡಾಗಿದ್ದರು. ಸರ್ಕಾರ  ಯುದ್ಧೋಪಾದಿಯಲ್ಲಿ ಕೈಗೊಂಡಿದ್ದ 33 ಗೇಟ್‌ಗಳ ಅಳವಡಿಕೆ ಕಾರ್ಯ ಪೂರ್ಣಗೊಂಡಿದ್ದು, ಇಂದು (ಜೂನ್ 25) ಅದ್ಧೂರಿಯಾಗಿ ಲೋಕಾರ್ಪಣೆಗೊಳ್ಳಲಿದೆ.

 

ಈ ಸಮಾರಂಭದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ತೆಲಂಗಾಣದ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಹಾಗೂ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರು ಒಟ್ಟಾಗಿ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ. ಈ ಮೂಲಕ ಮೂರು ರಾಜ್ಯಗಳ ನಡುವಿನ ಜಲ ಸಹಕಾರ ಮತ್ತು ಸಂಸ್ಕೃತಿಯ ಹೊಸ ಅಧ್ಯಾಯಕ್ಕೆ ನಾಂದಿ ಹಾಡಲಾಗಿದೆ. ಕೋಟ್ಯಾಂತರ  ರೂಪಾಯಿ ವೆಚ್ಚದಲ್ಲಿ ಅಳವಡಿಸಲಾದ ಈ ಅತ್ಯಾಧುನಿಕ ತಂತ್ರಜ್ಞಾನದ ಗೇಟ್‌ಗಳು ಮುಂದಿನ ದಶಕಗಳ ಕಾಲ ಜಲಾಶಯದ ಭದ್ರತೆಯನ್ನು ಖಾತ್ರಿಪಡಿಸಲಿವೆ.

Please follow and like us:

 

 

 

 

 

Translate »
[t4b-ticker]
error: Content is protected !!