https://youtu.be/NHc6OMSu0K4?si=SI_K4goOPEgwo6h2
ಮೂರು ರಾಜ್ಯಗಳ ಸಿಎಂ ಸಮಾಗಮ
ಹಂಪಿ ಟೈಮ್ಸ್ ಹೊಸಪೇಟೆ
ಕಲ್ಯಾಣ ಕರ್ನಾಟಕದ ರೈತರ ಪಾಲಿನ ಜೀವನಾಡಿ, ಲಕ್ಷಾಂತರ ಎಕರೆ ಕೃಷಿ ಭೂಮಿಗೆ ಜಲಧಾರೆ ನೀಡುವ ತುಂಗಭದ್ರಾ ಜಲಾಶಯವು ಇದೀಗ ನೂತನ ಕ್ರೆಸ್ಟ್ಗೇಟ್ಗಳೊಂದಿಗೆ ಹೊಸ ಇತಿಹಾಸ ಸೃಷ್ಟಿಸಲು ಸಜ್ಜಾಗಿದೆ. ಕಳೆದ ವರ್ಷ ಸಂಭವಿಸಿದ ತಾಂತ್ರಿಕ ದೋಷದಿಂದ ರೈತರು ಆತಂಕಕ್ಕೀಡಾಗಿದ್ದರು. ಸರ್ಕಾರ ಯುದ್ಧೋಪಾದಿಯಲ್ಲಿ ಕೈಗೊಂಡಿದ್ದ 33 ಗೇಟ್ಗಳ ಅಳವಡಿಕೆ ಕಾರ್ಯ ಪೂರ್ಣಗೊಂಡಿದ್ದು, ಇಂದು (ಜೂನ್ 25) ಅದ್ಧೂರಿಯಾಗಿ ಲೋಕಾರ್ಪಣೆಗೊಳ್ಳಲಿದೆ.

ಈ ಸಮಾರಂಭದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ತೆಲಂಗಾಣದ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಹಾಗೂ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರು ಒಟ್ಟಾಗಿ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ. ಈ ಮೂಲಕ ಮೂರು ರಾಜ್ಯಗಳ ನಡುವಿನ ಜಲ ಸಹಕಾರ ಮತ್ತು ಸಂಸ್ಕೃತಿಯ ಹೊಸ ಅಧ್ಯಾಯಕ್ಕೆ ನಾಂದಿ ಹಾಡಲಾಗಿದೆ. ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಅಳವಡಿಸಲಾದ ಈ ಅತ್ಯಾಧುನಿಕ ತಂತ್ರಜ್ಞಾನದ ಗೇಟ್ಗಳು ಮುಂದಿನ ದಶಕಗಳ ಕಾಲ ಜಲಾಶಯದ ಭದ್ರತೆಯನ್ನು ಖಾತ್ರಿಪಡಿಸಲಿವೆ.








More Stories
ತ್ಯಾಗದ ಫಲವೇ ಭಾರತದ ಸ್ವಾತಂತ್ರ್ಯ…….
ಆಗಸ್ಟ್ 14ರಂದು ಹೊಸಪೇಟೆಯಲ್ಲಿ “ನಾ… ಏರಿದ ಎತ್ತರಕ್ಕೆ…!!” ಕೃತಿ ಲೋಕಾರ್ಪಣೆ
34 ವರ್ಷಗಳ ಸೇವೆ: ನಿಂಬಳಗೆರೆ ಇಂಗ್ಲಿಷ್ ಶಿಕ್ಷಕ ಎಂ.ಬಿ. ನಾಗರಾಜ್ಗೆ ಬೀಳ್ಕೊಡುಗೆ