June 26, 2026

Hampi times

Kannada News Portal from Vijayanagara

ಜಿಲ್ಲಾವಾರು ಉಸ್ತುವಾರಿ ಸಚಿವರ ನೇಮಕ, ಯಾರು ಯಾವ ಜಿಲ್ಲೆಗೆ ಗೊತ್ತಾ?

https://youtu.be/NHc6OMSu0K4?si=SI_K4goOPEgwo6h2

ಪ್ರಕೃತಿ ವಿಕೋಪ ನಿರ್ವಹಣೆಗೆ ಹೊಸ ಜವಾಬ್ದಾರಿ: ಸಚಿವರ ನೇಮಕ ಮಾಡಿ ರಾಜ್ಯ ಸರ್ಕಾರದಿಂದ ಅಧಿಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪಗಳನ್ನು ಸಮರ್ಥವಾಗಿ ಎದುರಿಸಲು ಮತ್ತು ತಕ್ಷಣದ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು, ರಾಜ್ಯ ಸರ್ಕಾರವು ಪ್ರಮುಖ ನಿರ್ಧಾರ ಕೈಗೊಂಡಿದೆ. ಈ ಕುರಿತಾಗಿ ಜಿಲ್ಲಾವಾರು ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಅಧಿಕೃತ ಅಧಿಸೂಚನೆ ಹೊರಡಿಸಿದೆ.

ರಾಜ್ಯದಲ್ಲಿ ವಿಪತ್ತು ನಿರ್ವಹಣಾ ಕಾರ್ಯಗಳನ್ನು ಇನ್ನಷ್ಟು ಚುರುಕುಗೊಳಿಸುವ ಉದ್ದೇಶದಿಂದ, ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿಯನ್ನು ಹಂಚಿಕೆ ಮಾಡಲಾಗಿದೆ. ಈ ನೇಮಕಾತಿಯು ತಕ್ಷಣದಿಂದಲೇ ಜಾರಿಗೆ ಬಂದಿದ್ದು, ಮುಂದಿನ ಆದೇಶದವರೆಗೆ ಈ ಸಚಿವರು ತಮ್ಮಗೆ ಹಂಚಿಕೆಯಾದ ಜಿಲ್ಲೆಗಳಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ವಹಿಸಿಕೊಳ್ಳಲಿದ್ದಾರೆ.

ನೇಮಕಗೊಂಡ ಸಚಿವರು ಮತ್ತು ಅವರಿಗೆ ಹಂಚಿಕೆಯಾದ ಜಿಲ್ಲೆಗಳ ವಿವರ:

  • ಡಾ. ಜಿ. ಪರಮೇಶ್ವರ: ತುಮಕೂರು ಮತ್ತು ಚಿತ್ರದುರ್ಗ

  • ಶ್ರೀ ಕೆ.ಹೆಚ್. ಮುನಿಯಪ್ಪ: ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಮತ್ತು ವಿಜಯನಗರ

  • ಶ್ರೀ ರಾಮಲಿಂಗರೆಡ್ಡಿ: ಬೆಂಗಳೂರು ದಕ್ಷಿಣ ಮತ್ತು ಮಂಡ್ಯ

  • ಶ್ರೀ ಎಂ.ಬಿ. ಪಾಟೀಲ್: ವಿಜಯಪುರ ಮತ್ತು ಬಾಗಲಕೋಟೆ

  • ಶ್ರೀ ಕೆ.ಜೆ. ಜಾರ್ಜ್: ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ

  • ಶ್ರೀ ಕೃಷ್ಣ ಭೈರೇಗೌಡ: ಬೆಂಗಳೂರು ನಗರ ಮತ್ತು ಹಾಸನ

     

  • ಶ್ರೀ ಈಶ್ವರ್ ಖಂಡ್ರೆ: ಬೀದರ್ ಮತ್ತು ಗದಗ

  • ಶ್ರೀ ಸತೀಶ್ ಜಾರಕಿಹೋಳಿ: ಬೆಳಗಾವಿ, ಧಾರವಾಡ ಮತ್ತು ಹಾವೇರಿ

  • ಶ್ರೀ ಪ್ರಿಯಾಂಕ್ ಖರ್ಗೆ: ಕಲಬುರ್ಗಿ ಮತ್ತು ಯಾದಗಿರಿ

  • ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್: ರಾಯಚೂರು ಮತ್ತು ಕೊಪ್ಪಳ

  • ಶ್ರೀ ಯು.ಟಿ. ಖಾದರ್ ಫರೀದ್: ಉಡುಪಿ, ಕೊಡಗು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ

  • ಶ್ರೀ ಭೈರತಿ ಸುರೇಶ್: ಕೋಲಾರ ಮತ್ತು ಚಿಕ್ಕಬಳ್ಳಾಪುರ

  • ಡಾ. ಯತೀಂದ್ರ ಸಿದ್ದರಾಮಯ್ಯ: ಮೈಸೂರು ಮತ್ತು ಚಾಮರಾಜನಗರ

ಈ ನೇಮಕಾತಿಯು ಮುಖ್ಯಮಂತ್ರಿಯವರ ಅನುಮೋದನೆ ಪಡೆದಿದೆ ಎಂದು ಸರ್ಕಾರದ ಉಪ ಕಾರ್ಯದರ್ಶಿ ಎಸ್. ಶ್ರೀನಿವಾಸ ಅವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

Please follow and like us:

 

 

 

 

 

Translate »
[t4b-ticker]
error: Content is protected !!